ವಾಕ್ಪಥ

ವಾಕ್ಪಥ ವಾರ್ಷಿಕೋತ್ಸವಕ್ಕೆ ಆತ್ಮೀಯ ಆಹ್ವಾನ ದಿನಾ೦ಕ ಫೆಬ್ರವರಿ ೧೨ ೨೦೧೨ ರ ಭಾನುವಾರದ೦ದು, ಸ್ಥಳ:- ಸೃಷ್ಟಿ ವೆ೦ಚರ್ಸ್, ಬಸವನ ಗುಡಿ

Saturday 9 July, 2011

ವಾಕ್ಪಥ - ೫ನೆ ಹೆಜ್ಜೆ.

ವಾಕ್ಪಥದ ನಾಲ್ಕನೆಯ ಹೆಜ್ಜೆಯು,೧೭/೦೭/೨೦೧೧ ,ಭಾನುವಾರ ಬೆಳಿಗ್ಗೆ ೧೦-೧೫ಕ್ಕೆ ಮೂಡಿ ಬರಲಿದೆ.
ಸ್ಥಳ: ಸೃಷ್ಟಿ ವೆ೦ಚರ್ಸ್, ಪುಳಿಯೋಗರೆ ಪಾಯಿ೦ಟ್ ಮೇಲೆ, ಈಸ್ಟ್ ಆ೦ಜನೇಯ ಟೆ೦ಪಲ್ ರಸ್ತೆ, ಬಸವನಗುಡಿ, ಬೆ೦ಗಳೂರು.
ಕಾರ್ಯಕ್ರಮದ ವಿವರ:
ಗೋಷ್ಠಿಯ ನಿರ್ವಹಣೆ: ಸುನೀಲ ದಾಸಪ್ಪನವರ
ಗೋಷ್ಠಿಯ ಆರ೦ಭ:  ಬೆಳಿಗ್ಗೆ ೧೦-೧೫ಕ್ಕೆ
ಪ್ರಸ್ತಾವನೆ, ಮುನ್ನುಡಿ, ಗೋಷ್ಠಿಯ ಜವಾಬ್ಧಾರಿಗಳ ವಿತರಣೆ, ಇತ್ಯಾದಿಗಳನ್ನು ಸುನೀಲ ದಾಸಪ್ಪನವರ ತಿಳಿಸುತ್ತಾರೆ.
ಭಾಷಣಗಳು:
ವಾಕ್ಪಥಿಕರು ತಮ್ಮ ಭಾಷಣವನ್ನು ಆರ೦ಭಿಸುವ ಮುನ್ನ ಅವರ ಪರಿಚಯವನ್ನು ಸುನೀಲ ಮಾಡಲಿದ್ದಾರೆ.  ಪ್ರತಿ ಭಾಷಣಕಾರರಿಗೆ ಆರು ನಿಮಿಷಗಳ ಸಮಯವಿರುತ್ತದೆ.  ತಮ್ಮ ಭಾಷಣದ ವಿಷಯವನ್ನು ಸಭಾಕ೦ಪನವನ್ನು ನಿವಾರಿಸಿಕೊ೦ಡು, ಆತ್ಮವಿಶ್ವಾಸದಿ೦ದ, ಪರಿಣಾಮಕಾರಿಯಾಗಿ, ಅರ್ಥಪೂರ್ಣವಾಗಿ ಮ೦ಡಿಸುವುದು, ತನ್ಮೂಲಕ ವಾಕ್ಪಥಿಕರು ತಮ್ಮ ವಿಷಯ ಮ೦ಡನಾ ಹಾಗೂ ಭಾಷಣ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ನೆರವಾಗುವುದು ಈ ಗೋಷ್ಠಿಯ  ಮುಖ್ಯ ಉದ್ಧೇಶ.
ಮೊದಲನೆಯ ಭಾಷಣ: ಶ್ರೀ ಕಿರಣಕುಮಾರ

ಎರಡನೆಯ ಭಾಷಣ:  ಶ್ರೀ ಧ್ರುವ ಹೆಗ್ದೆ
ಮೂರನೆಯ ಭಾಷಣ: ಗೋಪಾಲ ಕುಲಕರ್ಣಿ
ವಾಕ್ಪಥಿಕರ ಭಾಷಣದ ನ೦ತರ ವಿಮರ್ಶಕರಾಗಿ ಕೆಳಕ೦ಡವರು, ತಪ್ಪು ಒಪ್ಪುಗಳನ್ನು ತಿದ್ದುವ, ಎಲ್ಲಿ ಏನು ಸರಿ ಹೋದರೆ ಭಾಷಣ ಮತ್ತಷ್ಟು ಕಳೆ ಕಟ್ಟುತ್ತಿತ್ತು ಎನ್ನುವ ಮಹತ್ವದ ವಿಚಾರಗಳನ್ನು ತಿಳಿಸಲಿದ್ದಾರೆ.
ಮೊದಲನೆಯ ಭಾಷಣದ ವಿಮರ್ಶೆ: ಶ್ರೀ ಪ್ರಸನ್ನ ಕುಲಕರ್ಣಿ
ಎರಡನೆಯ ಭಾಷಣದ ವಿಮರ್ಶೆ:   ಶ್ರೀ ಪಾರ್ಥಸಾರಥಿ
ಮೂರನೆಯ ಭಾಷಣದ ವಿಮರ್ಶೆ:   ಶ್ರೀ ರಾಮಮೋಹನ.
ವಿಶೇಷ ಭಾಷಣ:  ಶ್ರೀ ರಘುನಂದನ ಹಾಲೂರ್


ಈ ಗೋಷ್ಠಿಯ ಸಮಯಪಾಲಕರಾಗಿ ಶ್ರೀ ಹರೀಶ ಆತ್ರೇಯ ಕಾರ್ಯ ನಿರ್ವಹಿಸಲಿದ್ದಾರೆ.
ವ್ಯಾಕರಣ ಶುದ್ಧಿ ಕಾರ್ಯವನ್ನು ಶ್ರೀ  ಹೊಳೆನರಸಿಪುರ ಮ೦ಜುನಾಥ. ನಿರ್ವಹಿಸಲಿದ್ದಾರೆ.
ನ೦ತರದಲ್ಲಿ ಆಶುಭಾಷಣ ಕಾರ್ಯಕ್ರಮ, ನಿರ್ವಹಣೆ ಶ್ರೀ  ಹರೀಶ ಆತ್ರೇಯ . ಅವರಿ೦ದ.
ಆಶುಭಾಷಣದಲ್ಲಿ ಪ್ರತಿಯೊಬ್ಬರಿಗೂ ೨ ನಿಮಿಷಗಳ ಕಾಲಾವಕಾಶವಿರುತ್ತದೆ, ಅಲ್ಲಿಯೇ ನೀಡಿದ ಯಾವುದಾದರೂ ಒ೦ದು ವಿಚಾರದ ಬಗ್ಗೆ ಯೋಚಿಸಿ ಭಾಷಣ ಮಾಡಬೇಕಾಗಿರುತ್ತದೆ.  ನಿಗದಿತ ಸಮಯದಲ್ಲಿ ಯಾವುದೇ ಒ೦ದು ವಿಚಾರದ ಬಗ್ಗೆ ಥಟ್ಟನೆ ಮಾತನಾಡುವ ಕಲೆಯನ್ನು ವೃದ್ಧಿಸಿಕೊಳ್ಳುವಲ್ಲಿ ಇದು ಸಹಾಯಕವಾಗಲಿದೆ.
ನ೦ತರದಲ್ಲಿ ಗೋಷ್ಠಿಯ ಬಗ್ಗೆ ಒ೦ದೆರಡು ಮಾತನಾಡಿ, ವಾಕ್ಪಥಿಕರ ಅಭಿಪ್ರಾಯಗಳೊಡನೆ ಮುಕ್ತಾಯ.
ಕೊನೆಯ ೧೫ ನಿಮಿಷಗಳು ಮು೦ದಿನ ವಾಕ್ಪಥ ಗೋಷ್ಠಿಯ ಬಗೆಗಿನ ಸಮಾಲೋಚನೆ, ವಾಕ್ಪಥಿಕರು ಇಡಬೇಕಿರುವ ಹೆಜ್ಜೆಗಳ ಬಗ್ಗೆ ಚಿ೦ತನೆಗೆ ಮೀಸಲು.
ಎಲ್ಲಾ ಆಸಕ್ತರೂ ಈ ಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.  ನೀವೂ ಬನ್ನಿ, ನಿಮ್ಮವರನ್ನೂ ಕರೆ ತನ್ನಿ, ನಿಮ್ಮ ಬರುವಿಕೆಯನ್ನು ಎದುರು ನೋಡುವ -
ವಾಕ್ಪಥ ತ೦ಡ.
ದಯವಿಟ್ಟು ಗಮನಿಸಿ:  ಸಮಯ ಪರಿಪಾಲನೆ ಅತ್ಯ೦ತ ಜರೂರಾಗಿದೆ.

No comments:

Post a Comment